ಕಾಂತಾರ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ರಿಷಬ್ ಶೆಟ್ಟಿ, ನಿನ್ನೆಯ ಅಮೆಜಾನ್ ಪ್ರೈಂ ವಿಡಿಯೋ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದರು. ಸೌತ್ & ನಾರ್ತ್ ಇಂಡಿಯಾ ಸಮಾಗಮಕ್ಕೆ ಸಾಕ್ಷಿಯಂತೆ ಇದ್ದ ಈ ಕಾರ್ಯಕ್ರಮದಲ್ಲಿ ತಮ್ಮ ಮನದ ಮಾತನ್ನೂ ಹಂಚಿಕೊಂಡರು. ನಟ ವರುಣ್ ಧವನ್ ಜೊತೆ ವೇದಿಕೆಯನ್ನೇರಿದ ರಿಷಬ್ ಶೆಟ್ಟಿ ಕನ್ನಡದಲ್ಲೇ ಮಾತು ಆರಂಭಿಸಿದರು. ಕಾಂತಾರ ಕಥೆ ಇಂದು ನಿನ್ನೆ ಹುಟ್ಟಿದ್ದಲ್ಲ, ಅನೇಕ ವರ್ಷಗಳಿಂದ ಎದೆಯಲ್ಲಿ ಇಟ್ಟುಕೊಂಡಂಥ ಕಥೆ. ಆ ನಂತರ ಯಕ್ಷಗಾನದಿಂದಲೇ ನಟನೆಗಿಳಿದಿದ್ದಾಗಿ ರಿಷಬ್ ಹೇಳಿದರು. ಮೊದಲಿಂದಲೂ ನಮ್ಮ ಊರಿನ ಜನಪದ ಕತೆಗಳನ್ನು ಹೇಳುವ ಹಂಬಲ ನನ್ನಲ್ಲಿ ಇತ್ತು ಎಂದು ರಿಷಬ್ ಶೆಟ್ಟಿ ಹೇಳಿದರು.
ಚುನಾವಣೆ ನಂತರ ಬಿವೈ ವಿಜಯೇಂದ್ರ ಪಟ್ಟ ಕಳ್ಕೋಳ್ತಾರೆ!
ಬಿ.ವೈ ವಿಜಯೇಂದ್ರ ಅವರು 2024ರ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ತಮ್ಮ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟವನ್ನು ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ....
Discussion about this post